ಜನ ಖುಷಿಯಿಂದ ದಸರಾ ನೋಡಿದ್ದಾರೆ ನನಗೂ ಸಂತಸ:ಸಿಎಂ ಹರ್ಷ

ಮೈಸೂರು: ಜನ ಯಶಸ್ವಿ ಅಂದರೆ ದಸರಾ ಯಶಸ್ವಿ ಅಂತಲೇ ಅರ್ಥ,ಈ ಬಾರಿ ಹೆಚ್ಚು ಜನ ದಸರಾ ನೋಡಲು ಬಂದಿದ್ದಾರೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿಎಂ,ಈ ಬಾರಿ ಜಿಲ್ಲಾಡಳಿತ ಅದ್ಧೂರಿಯಾಗಿ ದಸರಾ ಆಚರಿಸಿದೆ, ಮಳೆ ಬಂದಿದ್ದು ಬಿಟ್ಟರೆ ಜನ ಖುಷಿಯಿಂದ ದಸರಾ ನೋಡಿದ್ದಾರೆ ನನಗೂ ಸಂತಸವಾಗಿದೆ ಎಂದು ಹೇಳಿದರು.

ನಾಡ ಹಬ್ಬ ಆದ ಕಾರಣ ಅದ್ಧೂರಿಯಾಗಿ ಆಚರಣೆ ಮಾಡಿದ್ದಾರೆ,ಪೌರಕಾರ್ಮಿಕರಿಂದ ಹಿಡಿದು ಹಿರಿಯ ಅಧಿಕಾರಿಗಳು,ಸಚಿವರು ಎಲ್ಲರೂ ಇದಕ್ಕೆ ಕಾರಣರು ಅದಕ್ಕಾಗಿ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ತಿಳಿಸಿದರು.

ಕೇಂದ್ರದಿಂದ ತೆರಿಗೆ ಪಾಲು ಹಂಚಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಉತ್ತರ ಪ್ರದೇಶಕ್ಕೆ ಬಂದಿರುವ ಪಾಲು ನೋಡಿ,ನಮಗೆ ಬಂದಿರುವ ಪಾಲನ್ನೂ ನೋಡಿ,ಅವರಿಗೂ ನಮಗೂ ಎಷ್ಟು ವತ್ಯಾಸ ಇದೆ ಅಂತ ಗೊತ್ತಾಗುತ್ತೆ, ನಮಗೆ ತೆರಿಗೆ ಪಾಲಿನಲ್ಲಿ ಅನ್ಯಾಯ ಆಗಿದೆ ಎಂದು ಬಹಳ‌ ಬೇಸರ ವ್ಯಕ್ತಪಡಿಸಿದರು.

ನಮಗೆ ತೆರಿಗೆ ಪಾಲಿನಲ್ಲಿ ಅನ್ಯಾಯ ಆಗಿದೆ ಅಂತ ಜನ ದನಿ ಎತ್ತಬೇಕು ಎಂದು ಇದೇ ವೇಳೆ ಸಿಎಂ ಕರೆ ನೀಡಿದರು.

ಬಿಜೆಪಿಯವರು ಕೇಂದ್ರ ಸರ್ಕಾರವನ್ನ ಸಮರ್ಥನೆ ಮಾಡ್ಕೊಂಡು ಮಾತಾಡೋದು ಕರ್ನಾಟಕದ ಜನರಿಗೆ ದ್ರೋಹ ಮಾಡಿದ‌ ಹಾಗೆ,ಇಷ್ಟೊಂದು ಜನ ಎಂಪಿ ಗೆಲ್ಲಿಸಿದಾಗ ರಾಜ್ಯದ ಪರ ದನಿ ಎತ್ತಬೇಕಲ್ವ,
ಇವತ್ತಿನ ವರಿಗೆ ದನಿ ಎತ್ತಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ತೆಗೆದುಕೊಳ್ಳುವ ವಿಷಯ ಕುರಿತು ಬಿಜೆಪಿ ವಿರೋಧ ವ್ಯಕ್ತಪಡಿಸಿದೆ ಯಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ, ಇದಕ್ಕೆ ಕಮಿಟಿ ರಚನೆ ಮಾಡಲಾಗಿತ್ತು. ಅದಕ್ಕೆ ಗೃಹ ಮಂತ್ರಿ ಅಧ್ಯಕ್ಷರು,ಕ್ಯಾಬಿನಟ್ ಮುಂದೆ ತಂದು ಒಪ್ಪಿಗೆ ಕೊಟ್ಟು ತೀರ್ಮಾನ ಆಗಿದೆ,ಆದರೆ ಇದು ಕೋರ್ಟ್‌ನಲ್ಲಿ ಸಲ್ಲಿಕೆ ಆಗಬೇಕು, ನ್ಯಾಯಾಲಯ ಒಪ್ಪಿದಾಗ ಮಾತ್ರ ಇದು ವಾಪಸ್ ಪಡೆಯಲು ಸಾಧ್ಯ ಆಗುತ್ತೆ ಎಂದು ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರು ಆರ್‌ಎಸ್‌ಎಸ್ ಮೇಲಿನ ಕೇಸ್ ವಾಪಸ್ ತಗೊಂಡ್ರಲ್ಲವಾ ನಮ್ಮನ್ನ ಪ್ರಶ್ನೆ ಮಾಡುವ ನೈತಿಕತೆ ಎಲ್ಲಿದೆ ಅವರಿಗೆ ಎಂದು ಸಿಎಂ ತಿರುಗೇಟು ನೀಡಿದರು.