ಮಂಡ್ಯ: ಉರಿಗೌಡ – ನಂಜೇಗೌಡರ ಬಗ್ಗೆ ಸಿನಿಮಾ ಮಾಡುತ್ತಿಲ್ಲ ಎಂದು ಸಚಿವ ಮುನಿರತ್ನ ತಿಳಿಸಿದ್ದಾರೆ.
ನಿರ್ಮಲಾನಂದನಾಥ ಶ್ರೀಗಳನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಉರಿಗೌಡ ನಂಜೇಗೌಡ ಕುರಿತು ಸಿನಿಮಾ ನಿರ್ಮಾಣ ಮಾಡುವುದಿಲ್ಲ ಎಂದು ಮುನಿರತ್ನ ಯುಟರ್ನ್ ಹೊಡೆದಿದ್ದಾರೆ.
ಉರಿಗೌಡ, ನಂಜೇಗೌಡ ಕುರಿತು ಸಿನಿಮಾ ನಿರ್ಮಾಣ ಮಾಡುವುದಾಗಿ ಸಚಿವ ಮುನಿರತ್ನ ಹೇಳಿಕೊಂಡಿದ್ದರು.
ಆದರೆ ಇದೀಗ ಸಿನಿಮಾ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಚಿವ ಮುನಿರತ್ನ ಮಾತನಾಡಿ ಉರಿಗೌಡ ನಂಜೇಗೌಡ ಕುರಿತು ಸಿನಿಮಾ ನಿರ್ಮಾಣ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮೇ 14ಕ್ಕೆ ಸಿನಿಮಾ ನಿರ್ಮಿಸಬೇಕೆಂದುಕೊಂಡಿದ್ದೆ,ಉರಿಗೌಡ ದೊಡ್ಡ ನಂಜೇಗೌಡರ ಬಗ್ಗೆ ಕೆಲ ದಾಖಲೆಗಳಿವೆ,ಆದರೆ ಉರಿಗೌಡ ಬಗ್ಗೆ ಬೇಕಾದಷ್ಟು ದಾಖಲೆಗಳಿಲ್ಲ ಎಂದು ಹೇಳಿದರು.
ನಿರ್ಮಲಾನಂದನಾಥ ಶ್ರೀಗಳ ಜೊತೆ ಮಾತನಾಡಿದ್ದೇನೆ. ಯಾರ ಮನಸ್ಸನ್ನೂ ನೋಯಿಸಿ ಸಿನಿಮಾ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.
ಸಿನಿಮ ಮಾಡಲು ಬಹಳ ಕಥೆಗಳು ಸಿಗುತ್ತವೆ, ಕಥೆಯ ಬಗ್ಗೆ ನಿರ್ಮಲಾನಂದನಾಥ ಶ್ರೀಗಳಿಗೆ ಹೇಳಿದ್ದೇನೆ. ಯಾರಿಗೂ ನೋಯಿಸುವ ಉದ್ಧೇಶವಿಲ್ಲ ಎಂದು ಮುನಿರತ್ನ ತಿಳಿಸಿದರು.