ಪಕ್ಷದಲ್ಲಿ ಬಿ ಎಸ್ ವೈ ಸೈಡ್ ಲೈನ್ ಮಾಡುವ ಪ್ರಶ್ನೆಯೇ ಇಲ್ಲ -ಬಿವೈ ವಿಜಯೇಂದ್ರ

ಬೆಂಗಳೂರು: ನಮ್ಮ ತಂದೆ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನ ಸೈಡ್ ಲೈನ್ ಮಾಡುವ ಪ್ರಶ್ನೆಯೇ ಇಲ್ಲ. ಅವರಿಗೆ ಪಕ್ಷ ಎಲ್ಲವನ್ನೂ ನೀಡಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ತಮ್ಮ ನಿವಾಸಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಭೇಟಿ ನೀಡಿ ಉಪಹಾರ ಕೂಟದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.

ಅಮಿತ್ ಶಾ ಅವರು ಪ್ರೀತಿಯಿಂದ ಮಾತನಾಡಿಸಿದರು, ಅವರ ನಡೆಯಿಂದ ಆನೆ ಬಲ ಬಂದಂತಾಗಿದೆ,ಇನ್ನಷ್ಟು ಉತ್ಸಾಹದಿಂದ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಮೊದಲಿನಿಂದಲೂ ನಮ್ಮ ತಂದೆ ಉತ್ಸಾಹದಲ್ಲಿದ್ದಾರೆ ಅವರು ಯಾರ ಜೊತೆ ಮಾತನಾಡಬೇಕೋ ಅವರ ಜೊತೆ ಮಾತನಾಡಿದ್ದಾರೆ. ಬಿಎಸ್ ವೈ ಮತ್ತು ಅಮಿತ್ ಶಾ ಅವರು ನಡುವೆ ರಾಜಕೀಯ ವಿಚಾರ ಚರ್ಚೆಯಾಗಿದೆ ಎಂದು ತಿಳಿಸಿದರು.

ಈ ಬಾರಿ ಅತಂತ್ರ ಸರ್ಕಾರ ಬರಲು ಬಿಡುವುದಿಲ್ಲ, ಬಹುಮತ ಪಡೆಯುವ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದರು.

ಶಿಕಾರಿಪುರ ಕ್ಷೇತ್ರದಲ್ಲಿ ನಾನು ಓಡಾಡುತ್ತಿದ್ದೇನೆ. ವರುಣಾದಲ್ಲಿ ನನ್ನ ಸ್ಪರ್ಧೆ ಬಗ್ಗೆ ವರಿಷ್ಠರು ತೀರ್ಮಾನಿಸಲಿದ್ದಾರೆ.  ನಾನು ಶಿಕಾರಿಪುರದಲ್ಲಿ ಒಂದು ಸುತ್ತು ಪ್ರವಾಸ ಮಾಡಿದ್ದೇನೆ. ಮತ್ತೊಮ್ಮೆ ಮಾಡುತ್ತೇನೆ ಎಂದು ವಿಜಯೇಂದ್ರ ತಿಳಿಸಿದರು.