ಯಾವ ಆಧಾರದ ಮೇಲೆ ಮೀಸಲಾತಿ ಘೋಷಣೆ ಮಾಡಿದ್ದೀರಿ; ಸರ್ಕಾರದ ‌ವಿರುದ್ಧ ಎಚ್ ಡಿ ಕೆ ಕಿಡಿ

ಮೈಸೂರು: ಯಾವ ಆಧಾರದ ಮೇಲೆ ರಾಜ್ಯ ಸರ್ಕಾರ ಮೀಸಲಾತಿ ಘೋಷಣೆ ಮಾಡಿದೆ. ವೈಜ್ಞಾನಿಕವಾಗಿ ಅಧ್ಯಯನ ಮಾಡಿದ್ದರಾ ಯಾರ ಸಲಹೆ ಪಡೆದು ಘೋಷಣೆ ಮಾಡಿದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಯಶಸ್ವಿ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮೈಸೂರಿನಲ್ಲಿ ಸೋಮಾವಾರ ಸುದ್ದಿಗೋಷ್ಠಿ  ಹಮ್ಮಿಕೊಂಡಿದ್ದರು.

ಇವರಿಗೆ ಮೀಸಲಾತಿ ಘೋಷಣೆ ಮಕ್ಕಳ ಆಟಿಕೆಯಂತೆ ಆಗಿದೆ,ಯಾವ‌ ಆದಾರ ಇಟ್ಟುಕೊಂಡು ಮಾಡಿದ್ದಾರೊ ಉತ್ತರಿಸಬೇಕು ಎಂದು ಕಿಡಿಕಾರಿದರು.

ಸಮಾವೇಶಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಮುಂದಿನ ಏಪ್ರಿಲ್ 10ರವೆಗೂ ಪಂಚರತ್ನ ಯಾತ್ರೆ ಮುಂದುವರೆಯಲಿದೆ.

ಬೆಂಗಳೂರು ನಗರದ ಕ್ಷೇತ್ರಗಳಲ್ಲಿ ನಾಳೆಯಿಂದ ರಥಯಾತ್ರೆ ನಡೆಯಲಿದೆ. ಏ.6ರಂದು ಮೈಸೂರಿನ ಪಿರಿಯಾಪಟ್ಟಣ, 7  ಕೆಆರ್ ನಗರ ನಂತರ ಕೊಳ್ಳೇಗಾಲ, ಹನೂರು, ಗುಂಡ್ಲುಪೇಟೆ ಕ್ಷೇತ್ರದಲ್ಲಿ ರಥಯಾತ್ರೆ ನಡೆಸುತ್ತೇವೆ ಎಂದು ತಿಳಿಸಿದರು.

ಸರ್ಕಾರದ ಸಾಧನೆ ಬಣ್ಣ ಬಣ್ಣದ ಜಾಹೀರಾತಿಗೆ ಸೀಮಿತವಾಗಿದೆ. ಉತ್ತರ ಕರ್ನಾಟಕ ಸಿಎಂ ಕ್ಷೇತ್ರದ ಬಡತನದ ಬಗ್ಗೆ ಕೇಂದ್ರ ವರದಿ ಮಾಡಿದೆ. ಅಪೌಷ್ಟಿಕತೆಯ ಬಗ್ಗೆಯೂ ಕೇಂದ್ರ ಸರ್ಕಾರ ವರದಿ ನೀಡಿದೆ.

ಡಬಲ್ ಇಂಜಿನ್ ಸರ್ಕಾರದ ಬಗ್ಗೆ ಹೇಳುತ್ತಾರೆ. ಬಡತನ ಅಪೌಷ್ಟಿಕತೆ ನಿವಾರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಮೋದಿ ಸಮಾಧಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ನಿಮ್ಮನ್ನು ಸಮಾಧಿ ಮಾಡಲು ಯಾರಿಗೆ ಆಗುತ್ತದೆ. ಅಂಬೇಡ್ಕರ್ ಅವರ ಸಂವಿಧಾನ ಸಮಾಧಿ ಮಾಡಲು ಹೊರಟಿರುವುದು ನೀವು ಎಂದು ಎಚ್ ಡಿ ಕೆ ಗುಡುಗಿದರು

ಮಹರಾಷ್ಟ್ರದವರು ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡಿದರು,ಆದರೂ ಸೌಜನ್ಯಕ್ಕೂ ನಮ್ಮ ಪರ ವಹಿಸಲಿಲ್ಲ. ನಿಮಗೆ ಕನ್ನಡಿಗರ ಮತ ಬೇಕು ಕನ್ನಡಿಗರಿಗೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿದರು.

ರಾಮನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಕಾರ್ಯಕ್ರಮಗಳಿಗೆ ಜನರನ್ನು ಕರೆತರಲು ಅಧಿಕಾರಿಗಳಿಗೇ ತಾಕೀತು ಮಾಡಿದ್ದಾರೆ. ಸರ್ಕಾರದ ಕಾರ್ಯಕ್ರಮದಲ್ಲಿ ಕೇಸರಿ ಬಾವುಟ ಬೇಕಿತ್ತಾ 3 ವರ್ಷ ಸುಮ್ಮನಿದ್ದ ಸರ್ಕಾರ ಈಗ ತರಾತುರಿಯಲ್ಲಿ ಶಂಕುಸ್ಥಾಪನೆ ಮಾಡ್ತಿದೆ.

ಈ ಮೂಲಕ ಬಿಜೆಪಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ. ಇದ್ಯಾವುದು ಹೆಚ್ಚು ದಿನ ನಡೆಯುವುದಿಲ್ಲ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕರುಗಳಾದ ಸಾ.ರಾ.ಮಹೇಶ್, ಜಿ.ಟಿ.ದೇವೇಗೌಡ ಮತ್ತಿತರರು ಉಪಸ್ಥಿತರಿದ್ದರು.