ಜಗನ್ ಮೋಹನ್ ರೆಡ್ಡಿಯವರನ್ನ ಬಂಧಿಸಲಿ:ಈಶ್ವರಪ್ಪ

ವಿಜಯಪುರ: ಜಗನ್ ಮೋಹನ್ ರೆಡ್ಡಿ ಅವರು ಸಿಎಂ ಆದ ನಂತರ ಇಡೀ ಪ್ರಪಂಚಕ್ಕೆ ಮಾಡಿದ್ದು ಮೋಸ,ಅವರನ್ನು ಬಂಧಿಸುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮದೊಂದಿಗೆ
ತಿರುಪತಿ ಲಡ್ಡುವಿನಲ್ಲಿ ಪ್ರಾಣಿಕೊಬ್ಬು ಬಳಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿದೇಶಿ ಕ್ರಿಸ್ಚಿಯನ್ ಮಷಿನರಿಗಳಿಂದ ಈ ತರಹ ನಡೆದಿದೆ. ಹಿಂದುತ್ವ ಪ್ರತಿಪಾದಕರಿಗೆ, ಹಿಂದೂಗಳ ಶ್ರದ್ಧೆಗೆ ಭಂಗ ತರುವ ಕೆಲಸ ಮಾಡಿದ್ದಾರೆ. ಈಗಲೂ ನಾವು ಮಾಡಿಲ್ಲ ಎಂದು ಹೇಳುತ್ತಾರೆ. ಲ್ಯಾಬ್ ರಿಪೋರ್ಟ್ ಬಗ್ಗೆ ಇವರಿಗೆ ನಂಬಿಕೆ ಇಲ್ಲವಾ ಎಂದು ಪ್ರಶ್ನಿಸಿದರು.

ನಮ್ಮ ಶ್ರದ್ಧೆ ಹಾಗೂ ಶ್ರದ್ಧಾಕೇಂದ್ರಕ್ಕೆ ಅಪಮಾನ ಮಾಡುವವರಿಗೆ ತಕ್ಕ ಶಿಕ್ಷೆ ಆಗಬೇಕು, ಇದರಲ್ಲಿ ವಿದೇಶಿ ಸಂಚಿದೆ, ಈ ಪ್ರಕರಣ ಸಿಬಿಐಗೆ ತನಿಖೆಗೆ ಕೊಡಬೇಕು ಎಂದು ಒತ್ತಾಯಿಸಿದರು.

ದೇವರ ದಯೆಯಿಂದ ಇಡೀ ದೇಶದ ಎಲ್ಲ ಪಕ್ಷದ ನಾಯಕರು ಇದನ್ನು ಖಂಡಿಸಿದ್ದಾರೆ. ಇದು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ, ತಿರುಪತಿ ತಿಮ್ಮಪ್ಪನ ಬಗ್ಗೆ ಇರುವ ಶ್ರದ್ಧೆಯಿಂದ ಎಲ್ಲರೂ ಇದನ್ನು ಖಂಡಿಸಿದ್ದಾರೆ ಎಂದು ಈಶ್ವರಪ್ಪ ತಿಳಿಸಿದರು.