ಕುಮಾರಸ್ವಾಮಿಯವರ ಕಾಲದಲ್ಲೇ ಟೌನ್ ಶಿಪ್ ತೀರ್ಮಾನ: ಡಿಕೆಶಿ

ಮೈಸೂರು: ಕುಮಾರಸ್ವಾಮಿ ಅವರ ಕಾಲದಲ್ಲೇ ಏಳು ಟೌನ್ ಶಿಪ್ ಮಾಡಬೇಕು ಎಂಬುದು ತೀರ್ಮಾನ ಆಗಿದ್ದು,ಅದಕ್ಕಾಗಿ 300 ಕೋಟಿ ಹಣ ಕೊಟ್ಟಿದ್ದರು ಎಂದು ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮೈಸೂರಿನಲ್ಲಿ ಮಾತನಾಡಿದ ಅವರು,ಟೌನ್ ಶಿಪ್ ಪ್ಲಾನ್ ಅವರ ಕಾಲದಲ್ಲೇ ಆಗಿದ್ದು ನಾನು ಡೈನೋಟಿಫಿಕೇಶ್ ಮಾಡಲು ಹೋಗುವುದಿಲ್ಲ ಎಂದು ಹೇಳಿದರು.

ಬಿಡದಿ ಟೌನ್ ಶಿಪ್ ಗೆ ರೈತರ ಭೂಮಿ ಕೈಬಿಡುವಂತೆ ಸಿಎಂ ಗೆ ದೇವೇಗೌಡರ ಪತ್ರ ವಿಚಾರಕ್ಕೆ ಮೇಲಿನಂತೆ ಪ್ರತಿಕ್ರಿಯಿಸಿದರು.

ಈ ಹಿಂದೆ ನನ್ನ ಮೇಲೆ ಏನೆಲ್ಲಾ ಹೇಳಿದ್ದರು ಅದೆಲ್ಲ ಇತಿಹಾಸ,ಟೌನ್ ಶಿಪ್ ಪಿತಾಮಹ ದೇವೇಗೌಡರು ಹಾಗೂ ಕುಮಾರಸ್ವಾಮಿ ಎಂದು ತಿರುಗೇಟು ನೀಡಿದರು.

ಯಾರು ಏನೇ ಹೇಳಿದರೂ ನಾವು ಗ್ರೇಟರ್ ಬೆಂಗಳೂರು ಮಾಡೇ ಮಾಡುತ್ತೇವೆ ಎಂದು ಕಡಕ್ಕಾಗಿ ಹೇಳಿದ ಡಿಕೆಶಿ,
ಬೆಂಗಳೂರಿಗಿಂತ ಚೆನ್ನಾಗಿ
10 ಸಾವಿರ ಎಕರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ,ಇದು ಮಾಡೆಲ್ ಸಿಟಿ ಆಗಲಿದೆ ಎಂದು ತಿಳಿಸಿದರು ‌

ರೈತರು ಜಮೀನಿನ ಬದಲಾಗಿ
ದುಡ್ಡು ತೆಗೆದುಕೊಳ್ಳಬಹುದು,
ಇಲ್ಲದಿದ್ರೆ ಅಭಿವೃದ್ದಿ ಪಡಿಸಿದ ಲ್ಯಾಂಡ್ ತೆಗೆದುಕೊಳ್ಳಬಹುದು ಎಂದು ಪ್ರಶ್ನೆಯೊಂದಕ್ಕೆ ಡಿಸಿಎಂ ಉತ್ತರಿಸಿದರು‌.

ಎರಡು ಬಾರಿ ಕುಮಾರಸ್ವಾಮಿ ಸಿಎಂ ಆಗಿದ್ದರಲ್ಲಾ ಯಾಕೆ ರೈತರ ಭೂಮಿ ಸ್ವಾಧೀನದಿಂದ ಕೈ ಬಿಡಲಿಲ್ಲ ಎಂದು ಪ್ರಶ್ನಿಸಿದ ಅವರು,ಈ ಬಗ್ಗೆ ದೇವೇಗೌಡರೇ ಹೇಳಲಿ ಎಂದು ಟಾಂಗ್ ನೀಡಿದರು‌

ಇದರಲ್ಲಿ ರಾಜಕೀಯ ಬೇಡ ಇದೆಲ್ಲ ನಿಮ್ಮ ಮಗನೆ ಮಾಡಿದ್ದು, ನಿಮ್ಮ ಕಾಲದಲ್ಲೇ ಆಗಿದ್ದು ಎಂದು ದೇವೇಗೌಡರಿಗೆ ಡಿಕೆಶಿ ತಿರುಗೇಟು ನೀಡಿದರು ‌

ಕಾವೇರಿ ನಮ್ಮ ಜೀವನದಿ. ತಾಯಿಗೆ ಆರತಿ ಮಾಡಬೇಕು ಅದಕ್ಕಾಗಿ ಕಾವೇರಿ ಆರತಿ ಮಾಡಲು ಮುಂದಾಗಿದ್ದೇವೆ. ವ್ಯವಸಾಯಕ್ಕೆ, ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯಕ್ಕೆ ಹಾಗೂ ಎಲ್ಲಾ ಜನರಿಗೆ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ ಎಂದು ತಿಳಿಸಿದರು.

ಭದ್ರತಾ ವೈಫಲ್ಯದ‌ ಬಗ್ಗೆ ಕೇಂದ್ರದ ಒಪ್ಪಿಗೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ನಾನು ಇಲ್ಲಿ ಬ್ಲೇಮ್ ಗೇಮ್ ಮಾಡುವುದಿಲ್ಲ, ಯಾರ ವಿರುದ್ದವೂ ಮಾತನಾಡು ವುದಿಲ್ಲ, ಇದು ರಾಜಕೀಯ ಮಾಡುವ ವಿಚಾರ ಅಲ್ಲ, ಯಾರೂ ಕೂಡಾ ಈ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು ‌

ಪಕ್ಷದ ಅಧ್ಯಕ್ಷ ಹಾಗೂ ಡಿಸಿಎಂ ಆಗಿ ಹೇಳುತ್ತಿದ್ದೇನೆ,ಈ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು, ಹೊರದೇಶದಿಂದ ಬಂದು ಶಾಂತಿ ಕದಡುವ ಕೆಲಸ ಮಾಡಿದ್ದಾರೆ, ಅವರನ್ನು ಮುಗಿಸುವ ಕೆಲಸ ಆಗಬೇಕು. ಕೇಂದ್ರ ಸರ್ಕಾರ ಈಗಾಗಲೇ ಆ ಕೆಲಸ ಮಾಡಿದೆ.ಈ ವಿಚಾರವಾಗಿ ನಮ್ಮ ಸಂಪೂರ್ಣ ಸಹಕಾರ ಇರಲಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ರಾಮನಗರ ಹೆಸರು ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ,ಅದನ್ನು ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು. ಅದನ್ನು ಮಾಡೇ ಮಾಡುತ್ತೇನೆ,
ನಾವೇನು ಹೊರಗಿನಿಂದ ಬಂದವರಲ್ಲ,
ನಮ್ಮ ಭೂಮಿ‌ ನಮ್ಮ ನೆಲದ ಬಗ್ಗೆ ನಮಗೆ ಗೊತ್ತು,ಯಾರು ಅಪ್ಪ ಅಮ್ಮನ ಹೆಸರು ಬದಲಾಯಿ ಸಲ್ಲ, ಅಫಿಡೆವಿಟ್ ಮಾಡಿಸಿಕೊಳ್ಳಬಹುದು ಅಷ್ಟೇ ಎಂದರು.

ಡಿ ಕೆ ಶಿವಕುಮಾರ್ ಬಗ್ಗೆ ಭಯನಾ ಅಸೂಯೆನಾ ಪ್ರಶ್ನೆ
ಏನು ಅಂತಾ ಗೊತ್ತಿಲ್ಲ ಆದರೆ ನನ್ನ ಮೇಲೆ ಅತಿಯಾದ ಪ್ರೀತಿ ಅದಕ್ಕಾಗಿ ನನ್ನ ವಿಷಯಕ್ಕೆ ಪದೇ, ಪದೇ ಬರುತ್ತಾರೆ ಎಂದು ಡಿ ಕೆ ಶಿವಕುಮಾರ್ ಮಾರ್ಮಿಕ ವಾಗಿ ನುಡಿದರು‌.