ಮುಡಾ ಕೇಸ್ ನಲ್ಲಿ ಇಡಿ ಎಂಟ್ರಿ:ಸಿದ್ದೂಗೆ ಮತ್ತೊಂದು ಸಂಕಷ್ಟ

ನವದೆಹಲಿ: ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್‌ ದಾಖಲಿಸಿದೆ.

ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್ ದಾಖಲಿಸಿದೆ.

ಸಿದ್ದರಾಮಯ್ಯ,ಅವರ ಪತ್ನಿ ಪಾರ್ವತಿ, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳು ಉಲ್ಲೇಖವಾಗಿದೆ.

ನಾಲ್ವರನ್ನು ಆರೋಪಿಗಳನ್ನಾಗಿಸಿ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲು ಮಾಡಿದ್ದು,ಇವರುಗಳ ವಿಚಾರಣೆಗೆ ಸಮನ್ಸ್ ನೀಡಲಿದೆ.