ನಾಗನಾರ್ ಉಕ್ಕು ಕಾರ್ಖಾನೆಯಲ್ಲಿನ ಸಮಸ್ಯೆ ಸರಿಪಡಿಸುತ್ತೇವೆ: H.D.K

ರಾಯಪುರ (ಛತ್ತೀಸಗಢ): ನಾಗನಾರ್ ನಲ್ಲಿರುವ ರಾಷ್ಟ್ರೀಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ಕೆಲವು ಸಮಸ್ಯೆಗಳಿವೆ. ಶೀಘ್ರವೇ ಎಲ್ಲವನ್ನೂ ಸರಿಪಡಿಸಲಾಗುವುದು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ನಾಗನಾರ್ ನಲ್ಲಿರುವ ರಾಷ್ಟ್ರೀಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಭೇಟಿ ನೀಡಿ ರಾಯಪುರಕ್ಕೆ ಆಗಮಿಸಿದ ವೇಳೆ ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಉಕ್ಕು ಸಂಗ್ರಹ, ಸಾಗಣೆ,ಮಾರುಕಟ್ಟೆ ಸೇರಿ ಕೆಲ ಸಮಸ್ಯೆಗಳನ್ನು ಕಾರ್ಖಾನೆ ಎದುರಿಸುತ್ತಿದೆ,ಈ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡಿದ್ದೇನೆ,ಸಂಬಂಧಪಟ್ಟ ಸಚಿವಾಲಯ, ಅಧಿಕಾರಿಗಳ ಜತೆ ಸಮಾಲೋಚನೆ ನಡೆಸುತ್ತೇನೆ ಎಂದು ತಿಳಿಸಿದರು.

ನಾಗನಾರ್ ಕಾರ್ಖಾನೆ ದೇಶದಲ್ಲಿ ಅತ್ಯುತ್ತಮ ಉಕ್ಕು ತಯಾರಿಕಾ ಘಟಕಗಳಲ್ಲಿ ಒಂದು. ಆರಂಭವಾದ ಒಂದೇ ವರ್ಷದಲ್ಲಿ ಒಂದು ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡಿದೆ. ಹೀಗಾಗಿ ಈ ಘಟಕಕ್ಕೆ ಉತ್ಪಾದನಾ ಕ್ಷಮತೆ ಇದೆ ಆದ್ದರಿಂದ ಕೆಲ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ ಡಿ ಕೆ ಹೇಳಿದರು.

ರಾತ್ರಿ ರಾಯಪುರದಲ್ಲೇ ವಾಸ್ತವ್ಯ ಹೂಡಿ ಮಂಗಳವಾರ ಬೆಳಗ್ಗೆ ಬಿಲಾಯ್ ಉಕ್ಕು ಕಾರ್ಖಾನೆಗೆ ಭೇಟಿ ನೀಡಲಿದ್ದಾರೆ.