ಸಿದ್ದರಾಮಯ್ಯ ರಾಜೀನಾಮೆಗೆ‌ ಅಶೋಕ್ ಆಗ್ರಹ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ‌ ಸಿದ್ದರಾಮಯ್ಯ ನವರ ವಿರುದ್ಧ ರಾಜ್ಯಪಾಲರ ನಿರ್ಧಾರವನ್ನ ಹೈಕೋರ್ಟ್ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ ಆದಿಯಾಗಿ, ಸಚಿವರು, ಶಾಸಕರು ಸೇರಿದಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರು ಮತ್ತು ರಾಜಭವನವನ್ನ ನಿಂದಿಸುತ್ತಾ ಬಂದಿದ್ದು, ಹೈಕೋರ್ಟ್ ತೀರ್ಪು ಇಡೀ ಕಾಂಗ್ರೆಸ್ ಪಕ್ಷಕ್ಕೆ ಛಡಿ ಏಟು ಕೊಟ್ಟಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನ ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.